ಗೋಕುಲ್ ಕೃಷ್ಣನ್ ಮೇಲೆ ಹಲ್ಲೆ-ದೂರು ದಾಖಲು
ಸುದ್ದಿಲೈವ್/ಶಿವಮೊಗ್ಗ
ನಿನ್ನೆ ಭದ್ರಾವತಿಯಲ್ಲಿ ನಡೆದ ಘಟನೆಗೆ ಕುರಿತಂತೆ ಗಾಯಾಳು ಹಾಗೂ ಬಿಜೆಪಿ ಕಾರ್ಯಕರ್ತ ಗೋಕುಲ್ ಕೃಷ್ಣನ್ ರನ್ನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಭೇಟಿಯಾದ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಗೋಕುಲ್ ಹಲ್ಲೆ ಮಾಡಿದ ಬಗ್ಗೆ ವಿವರಣೆ ನೀಡಿದ್ದಾರೆ.
ಭದ್ರಾವತಿಯಲ್ಲಿ ಅಕ್ರಮ ದಂಧೆ ನಡೆಯುತ್ತಿದೆ. ಅಕ್ರಮ ದಂಧೆ ತಡೆಗಟ್ಟಲು ಪೊಲೀಸರು ವಿಫಲರಾಗಿದ್ದಾರೆ. ಅಕ್ರಮ ದಂಧೆ ಹಿಂದೆ ಶಾಸಕ ಬಿ.ಕೆ.ಸಂಗಮೇಶ್ವರ ಅವರ ಕೈವಾಡ ಇದೆ. ಇದನ್ನು ಪ್ರಶ್ನಿಸಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಕ್ಕೆ ಕಾರು ಜಖಂ ಮಾಡಲಾಗಿದೆ ಎಂದು ಗೋಕುಲ್ ಉತ್ತರಿಸಿದ್ದಾರೆ.
ನಿನ್ನೆ ರಾತ್ರಿ ಹೋಟೆಲ್ ಗೆ ಊಟ ಪಾರ್ಸಲ್ ತರಲು ಹೋದಾಗ ಹಲ್ಲೆ ನಡೆಸಲಾಗಿದೆ. ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಹೋದಾಗ ಅಲ್ಲಿಯೂ ಹಲ್ಲೆ ನಡೆದಿದೆ. ಹೀಗಾಗಿಯೇ ಭದ್ರಾವತಿಯಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿದ್ದಾರೆ.
ಭದ್ರಾವತಿ ಬಿಹಾರ ರಾಜ್ಯವಾಗ್ತಿದೆ. ಎಂದ ಗೋಕುಲ್ ಕೃಷ್ಣನ್ ಭದ್ರಾವತಿಯಲ್ಲಿ ಹೇಳೋರು ಕೇಳೋರು ಇಲ್ಲದಾಗಿದೆ ಎಂದು ಹೇಳಿದ್ದಾರೆ. ಮತ್ತೊಂದು ಕಡೆ ಕುಮಾರ್ ಅವರಿಗೆ ಗೋಕುಲ್ ಕೃಷ್ಣನೇ ಕರೆ ಮಾಡಿ ಕರೆಯಿಸಿಕೊಂಡೊರುವುದಾಗಿ ಹೇಳಲಾಗುತ್ತಿದೆ. ಈ ಹಲ್ಲೆ ವೈಯುಕ್ತಿಕ ಕಾರಣಗಳಿಂದ ನಡೆದಿರುವುದಾಗಿ ಹೇಳಲಾಗುತ್ತಿದೆ.
ಈ ಮಧ್ಯೆ ಗೋಕುಲ್ ಫೇಸ್ ಬುಕ್ ನಲ್ಲಿ ಎಸ್ ಕುಮಾರ್ ವಿರುದ್ಧ ಪ್ರಚೋಧನಾ ಪೋಸ್ಟರ್ ಗಳನ್ನ ಹಾಕಿಕೊಂಡಿದ್ದಕ್ಕೆ ಹಲ್ಲೆ ನಡೆದಿದೆ ಎಂಬ ಮಾತು ಸಹ ಕೇಳಿ ಬಂದಿದೆ. . ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಗೋಕುಲ್ ದೂರು ದಾಖಲಿಸಿದ್ದಾರೆ.
ಮನೆಯ ಮುಂದೆ ನಿಂತಿದ್ದ ಕಾರನ್ನ ಜಖಂಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಪೊಲೀಸರು ಬಂಧಿಸಿದ್ದಾರೆ. ಗಣೇಶ, ಹರ್ಷ ನಂಜೇಗೌಡರನ್ನ ಬಂಧಿಸಲಾಗಿದೆ. ಹಲ್ಲೆ ಪ್ರಕರಣದಲ್ಲಿ ಎಸ್ಪಿ ಮಿಥುನ್ ಕುಮಾರ್ ಪ್ರತಿಕ್ರಿಯಿಸಿದ್ದು ದೂರು ದಾಖಲಿಸಿಕೊಂಡು ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ-https://suddilive.in/archives/4696