ರಾಜಕೀಯ ಸುದ್ದಿಗಳು

ಸದಾಶಿವ ಆಯೋಗದ ವಿರುದ್ಧ ಮೀಸಲಾತಿ ಸಂರಕ್ಷಣಾ ಸಮಿತಿ ಒಕ್ಕೂಟದಿಂದ ಪ್ರತಿಭಟನೆ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗದಲ್ಲಿ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿ ವಿರೋಧಿಸಿ ಮೀಸಲಾತಿ ಸಂರಕ್ಷಣ ಒಕ್ಕೂಟದಿಂದ ಪ್ರತಿಭಟನೆ ನಡೆದಿದೆ. ನಗರದ ಶಿವಪ್ಪನಾಯಕ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆದಿದೆ.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮೀಸಲಾತಿ ಸಂರಕ್ಷಣಾ ಒಕ್ಕೂಟ ಸದಾಶಿವ ಆಯೋಗದ ವರದಿಯನ್ನ ತಿರಸ್ಕರಿಸುವಂತೆ ಆಗ್ರಹಿಸಿದೆ. ಬಂಜಾರ, ಭೋವಿ, ಕೊರಮ, ಕೊರಚ ಜನಾಂಗಗಳು ಸೇರಿರುವ ಮೀಸಲಾತಿ ಸಂರಕ್ಷಣಾ ಒಕ್ಕೂಟ ಒಳ ಮೀಸಲಾತಿ ಕೊಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ ಎಂಬ ಸುಪ್ರೀಂ ಕೋರ್ಟ್ ತಿಳಿಸಿದ ಹಿನ್ನೆಲೆಯಲ್ಲಿ ಒಳ ಮೀಸಲಾತಿ ನೀಡುವುದನ್ನ ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದೆ.

ಸದಾಶಿವ ಆಯೋಗದ ವರದಿಯನ್ನು ವಿಧಾನಸಭಾ ಅಧಿವೇಶನದಲ್ಲಿ ಚರ್ಚೆಗೆ ಮಂಡಿಸಬಾರದು. ಈ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬಾರದು. ಹಿಂದಿನ ಸರ್ಕಾರ ತಿರಸ್ಕರಿಸಿರುವ ಈ ವರದಿಯನ್ನು ಮತ್ತೊಮ್ಮೆ ಜಾರಿಗೆ ತರುತ್ತೇವೆ ಎಂಬ ವಿಷಯ ತಕ್ಷಣದಿಂದ ನಿಲ್ಲಿಸಬೇಕು ಎಂದು ಆಗ್ರಹಿಸಿದೆ.

ಮೀಸಲಾತಿ ಸಂರಕ್ಷಣಾ ಒಕ್ಕೂಟದ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪ್ರತಿಭಟನೆಯ ವೇಳೆ

ಇದನ್ನೂ ಓದಿ-https://suddilive.in/archives/4869

Related Articles

Leave a Reply

Your email address will not be published. Required fields are marked *

Back to top button