ಸ್ಥಳೀಯ ಸುದ್ದಿಗಳು

ರಸ್ತೆಗೆ ಪುನೀತ್ ರಾಜ್‍ಕುಮಾರ್ ನಾಮಕರಣ : ಆಕ್ಷೇಪಣೆ ಆಹ್ವಾನ

ಸುದ್ದಿಲೈವ್/ಭದ್ರಾವತಿ

ಭದ್ರಾವತಿ ನಗರಸಭಾ ವ್ಯಾಪ್ತಿಯ ವಾರ್ಡ್ ನಂ.06 ರ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ವೃತ್ತದ ಬಳಿಯಿಂದ ರಂಗಪ್ಪ ವೃತ್ತದವರೆಗಿನ ರಸ್ತೆಗೆ ‘ಪುನೀತ್ ರಾಜ್‍ಕುಮಾರ್ ರಸ್ತೆ’ ಎಂದು ನಾಮಕರಣ ಮಾಡಲು ನ.25 ರಂದು ನಡೆದ ಕೌನ್ಸಿಲ್ ಸಾಮಾನ್ಯ ಸಭೆಯಲ್ಲಿ ನಡವಳಿಕೆ ರೀತ್ಯಾ ಸರ್ವಾನುಮತದಿಂದ ತೀರ್ಮಾನಿಸಲಾಗಿದೆ.

ಸಾರ್ವಜನಿಕರು ನಾಮಕರಣ ಮಾಡುವ ಬಗ್ಗೆ ತಮ್ಮ ಸಲಹೆ ಸೂಚನೆ ಅಥವಾ ತಕರಾರು/ಆಕ್ಷೇಪಣೆಗಳಿದ್ದಲ್ಲಿ ಜ.16 ರೊಳಗೆ ಭದ್ರಾವತಿ ನಗರಸಭೆ, ಪೌರಾಯುಕ್ತರು ಇವರಿಗೆ ಲಿಖಿತವಾಗಿ ಸಲ್ಲಿಸಬಹುದೆಂದು ಭದ್ರಾವತಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ-https://suddilive.in/archives/5000

Related Articles

Leave a Reply

Your email address will not be published. Required fields are marked *

Back to top button