ರಾಜಕೀಯ ಸುದ್ದಿಗಳು

ಸಿದ್ದರಾಮಯ್ಯ ಹುಚ್ಚು ದೊರೆ-ಈಶ್ವಪ್ಪ ಹಿಜಬ್ ಕುರಿತು ಹೇಳಿಕೆ

ಸುದ್ದಿಲೈವ್/ಶಿವಮೊಗ್ಗ.

ಮಹಮ್ಮದ್ ಬಿನ್ ತೊಘಲಕ್ ಹೆಸರು ಕೇಳಿದ್ದೀರಿ. ಆತನನ್ನು ಹುಚ್ವು ದೊರೆ ಅಂತಿದ್ದರು. ಸಿದ್ದರಾಮಯ್ಯ ಹುಚ್ಚು ದೊರೆ ಆಗಿದ್ದಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಆರೋಪಿಸಿದರು.

ಮಾಧ್ಯಮಗಳಿಗೆ ಮಾತನಾಡಿ, ಕೋರ್ಟ್ ನಲ್ಲಿ ಈ ಬಗ್ಗೆ ಚರ್ಚೆ ಆಗ್ತಿದೆ. ಮುಸ್ಲಿಂರು ತೃಪ್ತಿಪಡಿಸಲು ಕಾನೊನು, ಹೈಕೋರ್ಟ್, ಸಚಿವ ಸಂಪುಟ ಸದಸ್ಯರು ಲೆಕ್ಕಕ್ಕಿಲ್ಲ.  ಸರಕಾರಿ ಆದೇಶ ಆಗಿಲ್ಲ. ಬಾಯಲ್ಲಿ ಹೇಳಿ ಬಿಟ್ಟಿದ್ದಾರಂತೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಯಾವ್ದು ಬೇಡ್ವಾ? ರಾಜ್ಯದಲ್ಲಿ ಹಿಂದು‌ ಮುಸ್ಲಿಂ ಹೊಡೆದಾಡ್ತೀರಿ ಇದು ಅವರ ಆಸೆ ಇರಬಹುದು ಎಂದು ಶಂಕಿಸಿದ್ದಾರೆ.

ಸ್ಪೀಕರ್ ಗೆ ಎಲ್ಲರೂ ತಲೆಬಾಗು ಬೇಕು ಅಂತ ಜಮೀರ್ ಅಹಮ್ಮದ್ ತೆಲಂಗಾಣದಲ್ಲಿ ಹೇಳ್ತಾರೆ. ರಾಜ್ಯದಲ್ಲಿ ಹಿಂದು ಮುಸ್ಲಿಂರು ಗೊಂದಲಕ್ಕೆ ಬೀಳಬೇಕು. ಮುಸ್ಲಿಂ ಓಟು ಕಾಂಗ್ರೆಸ್ ಗೆ ಬೀಳಬೇಕು ಎಂಬ ಒಂದೇ ಉದ್ದೇಶ‌ ಅವರದ್ದು. ಬಿಜೆಪಿ ಜೆಡಿಎಸ್ ಒಂದಾಗಿರೋದಕ್ಕೆ ಗಾಬರಿಯಾಗಿದೆ, ಭಯವಾಗಿದೆ. ಕಳೆದ ಬಾರಿ ಕಾಂಗ್ರೆಸ್ ಲೋಕಸಭೆಯಲ್ಲಿ ಒಂದು ಸ್ಥಾನ ಪಡೆದಿತ್ತು. ಈ ಬಾರಿ ಒಂದೇ ಒಂದು ಸ್ಥಾನ ಬರಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ಹೀಗಾಗಿ ಈಜಬ್ ನಿಷೇಧಕ್ಕೆ ಕಾಂಗ್ರೆಸ್ ಕೈ ಹಾಕಿದೆ. ಉಡುಪಿಯಲ್ಲಿ ಹಬ್ಬಿದ ಈ ಕಿಚ್ಚು ಇಡಿ ರಾಜ್ಯಕ್ಕೆ ಹಬ್ಬಿತ್ತು. ನಂತರ ಇದು ನ್ಯಾಯಾಲಯದ ಮೆಟ್ಟಿಲೇರಿತ್ತು. ನ್ಯಾಯಾಲಯ ಸಹ ರಾಜ್ಯ ಸರಕಾರ ತೀರ್ಪು ಸರಿ ಇದೆ ಅಂತಾ ತಿಳಿಸಿತ್ತು. ಸಿದ್ದರಾಮಯ್ಯ ಅವರಿಗೆ ಕೋರ್ಟ್ ಬಗ್ಗೆ ಗೌರವ ಇದೆಯಾ? ರಾಜ್ಯದಲ್ಲಿ ಗಲಾಟೆ, ದೊಂಬಿ, ಕೊಲೆ ಆದ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣ ಎಂದು ನೇರವಾಗಿ ಆರೋಪಿಸಿದ್ದಾರೆ.

ಇದನ್ನೂ ಓದಿ-https://suddilive.in/archives/5304

Related Articles

Leave a Reply

Your email address will not be published. Required fields are marked *

Back to top button