ಕ್ರೈಂ ನ್ಯೂಸ್

ಕ್ಯಾತ್ಸಂದ್ರದಲ್ಲಿ ಸಚಿವ ಮಧು ಬಂಗಾರಪ್ಪನವರು ಪ್ರಯಾಣಿಸುತ್ತಿದ್ದ ಕಾರಿಗೆ ಉಜ್ಜಿಕೊಂಡು ಹೋದ ಲಾರಿ

ಸುದ್ದಿಲೈವ್/ತುಮಕೂರು

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಸ್ವಲ್ಪದರಲ್ಲಿಯೇ ದುರಂತವೊಂದು ತಪ್ಪಿದೆ. ಈ ಘಟನೆ ತಡರಾತ್ರಿ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ನಿನ್ನೆ ತಡರಾತ್ರಿ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ಸಚಿವ ಮಧು ಬಂಗಾರಪ್ಪನವರು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿಯೊಂದು ಉಜ್ಜಿಕೊಂಡು ಹೋಗಿದೆ.

ಕಳೆದೆರಡು ದಿನಗಳಿಂದ ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವರು ನಿನ್ನೆ ರಾತ್ರಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಬೆಂಗಳೂರಿನ ಮಾರ್ಗ ಮಧ್ಯದಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ಜಖಂ ಆಗಿದೆ.

ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ. ಅಪಘಾತದ ಬಳಿಕ ಬೇರೆ ಕಾರಿನಲ್ಲಿ ಸಚಿವ ಮಧುಬಂಗಾರಪ್ಪ ಬೆಂಗಳೂರಿಗೆ ತೆರಳಿದ್ದಾರೆ. ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ-https://suddilive.in/archives/5619

Related Articles

Leave a Reply

Your email address will not be published. Required fields are marked *

Back to top button