ಜಿಲ್ಲಾ ಉಸ್ತುವಾರಿ ಸಚಿವರ ತವರಿನಲ್ಲೇ ವಿದ್ಯಾರ್ಥಿಗಳಿಂದ ಶಾಲೆಯ ಶೌಚ ಸ್ವಚ್ಛತೆ-ಕ್ರಮಕೈಗೊಳ್ಳುವಂತೆ ಸಂಘಟನೆ ಆಗ್ರಹ
ಸುದ್ದಿಲೈವ್/ಶಿವಮೊಗ್ಗ
ಮಾಲೂರು ತಾಲೂಕಿನ ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಆರೋಪದ ಬೆನ್ನಲ್ಲೇ ಶಿಕ್ಷಣ ಸಚಿವರ ತವರು ಜಿಲ್ಲೆಯಾದ ಶಿವಮೊಗ್ಗದ ಭದ್ರಾವತಿ ತಾಲೂಕಿನ ಗುಡ್ಡದ ನೇರಳೆಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯವನ್ನ ಸ್ವಚ್ಛಗೊಳಿಸಿದ ವಿಡಿಯೋವೊಂದು ವೈರಲ್ ಆಗಿದೆ. ಈ ಕುರಿತು ಡಿಎಸ್ ಎಸ್ ಸಂಘಟನೆ ಎಸಿಗೆ ಮನವಿ ನೀಡಿದೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗುಡ್ಡದ ನೇರಳೆಕೆರೆಯಲ್ಲಿ ಶಾಲೆಯ ಮಕ್ಕಳಿಂದ ಶೌಚಾಲಯ ಸ್ವಚ್ಚಗೊಳಿಸಿದ ಮುಖ್ಯ ಶಿಕ್ಷಕರ ವಿರುದ್ದ ಆಗಾಗ್ಗೆ ಮಕ್ಕಳಿಂದ ಶಾಲೆಯ ಶೌಚಾಲಯ ಸ್ವಚ್ಛಗೊಳಿಸುವ ಆರೋಪ ಕೇಳಿ ಬಂದಿದೆ.
ದಲಿತ ಸಂಘರ್ಷ ಸಮಿತಿ ಮುಖ್ಯ ಶಿಕ್ಷಕರ ವಿರುದ್ದ ಈ ಬಗ್ಗೆ ಎಸಿ ಅವರಿಗೆ ದೂರು ನೀಡಿದೆ. ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಮುಖ್ಯ ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.
ಶಾಲಯ ಶೌಚಾಲಯಗಳನ್ನ ಸ್ವಚ್ಛಗೊಳಿಸಲು ಸಿಬ್ಬಂದಿಗಳನ್ನ ನೇಮಿಸಿಕೊಂಡು ಕ್ಲೀನ್ ಮಾಡಿಸದೆ ವಿದ್ಯಾರ್ಥಿಗಳಿಂದಲೇ ಸ್ವಚ್ಚಗೊಳಿಸಲು ಶಾಲೆ ಮುಂದಾಗಿದೆ. ಈ ಬಗ್ಗೆ ಪೋಷಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಕೇಳಿದಾಗ ಪೋಷಕರ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಸಂಘಟನೆ ಮನವಿಯಲ್ಲಿ ತಿಳಿಸಿದೆ.
ಇದನ್ನೂ ಓದಿ-https://suddilive.in/archives/5634