ಸ್ಥಳೀಯ ಸುದ್ದಿಗಳು

25-26 ಸೀಟು ಗೆಲ್ಲೋದು ಪಕ್ಕ-ಬಿಎಸ್ ವೈ

ಸುದ್ದಿಲೈವ್/ಶಿವಮೊಗ್ಗ

ಕರ್ನಾಟಕದ 28 ಲೋಕಸಭಾ ಕ್ಷೇತ್ರದಲ್ಲಿ 25 ರಿಂದ 26 ಕ್ಷೇತ್ರದಲ್ಲಿ ಗೆದ್ದು ನಿಮ್ಮನ್ನು ನೋಡಲು ನಾನು ಸಂಸತ್ ಗೆ  ಬರ್ತೇನೆ ಎಂದು ಮೋದಿಗೆ ಮಾತು ಕೊಟ್ಟಿರುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಮಾತನಾಡಿ, ಒಂದೆರಡು ಸೀಟು ಆಚೆ, ಈಚೆ ಆಗಬಹುದು. ಶಿವಮೊಗ್ಗ ಕ್ಷೇತ್ರದಲ್ಲಿ ಈಗಾಗಲೇ ಗೆದ್ದು ಆಗಿದೆ. ಹೆಚ್ಚಿನ ಅಂತರಕ್ಕಾಗಿ ನಾವು ಪ್ರಯತ್ನ ಮಾಡುತ್ತಿದ್ದೇವೆ. ಜನ ಆಶೀರ್ವಾದ ಮಾಡುತ್ತಾರೆಂಬ ವಿಶ್ವಾಸ ಇದೆ. ನನ್ನ ಅವಶ್ಯಕತೆ ಎಲ್ಲಿದೆ ಅಲ್ಲಿಗೆ ಹೋಗಿ ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು.

ಕಲ್ಬುರ್ಗಿಯಲ್ಲಿ ಮೋದಿ ಕಾರ್ಯಕ್ರಮ ತುಂಬಾ ಯಶಸ್ವಿಯಾಗಿದೆ. 28 ಕ್ಕೆ 28 ಗೆಲ್ಲಲು ಪ್ರಯತ್ನ ಮಾಡ್ತಾ ಇದ್ದೇವೆ. ಕೂತಲ್ಲೂ ನಿಂತಲ್ಲೂ ಒಳ್ಳೆಯ ಅಭಿಪ್ರಾಯ ಬರ್ತಿದೆ ಎಂದು ತಿಳಿಸಿದರು.

ಈಶ್ವರಪ್ಪ ಸಿಟ್ಟಲ್ಲಿ ನನ್ನ ವಿರುದ್ಧ ಮಾತಾನಾಡಿದ್ದಾರೆ.ಮೋದಿ ಕಾರ್ಯಕ್ರಮ ಕ್ಕೆ ಈಶ್ವರಪ್ಪ ಬರ್ತಾರೆ. ಅವರು ಕೂಡ ಪಕ್ಷ ಕಟ್ಟಲು ಪ್ರಮುಖ ಪಾತ್ರ ವಹಿಸಿದ್ದಾರೆ. ಎಲ್ಲಾ ಸರಿ ಹೋಗುತ್ತದೆ, ಅನ್ನೋ ವಿಶ್ವಾಸ ಇದೆ. ಅವರ ಮಗನಿಗೆ ಟಿಕೆಟ್ ತಪ್ಪಲು ನಾನು ಕಾರಣವಲ್ಲ. ಅದಕ್ಕೆ ಪಕ್ಷದ ಚುನಾವಣೆ ಸಮಿತಿ ನಿರ್ಧಾರ ಮಾಡಿರುವುದು ಕಾರಣ ಎಂದು ಸ್ಪಷ್ಟಪಡಿಸಿದರು.

ಎಲ್ಲಾವು ಸರಿ ಹೋಗುತ್ತದೆ ಅಂದುಕೊಂಡಿದ್ದೇನೆ. ಈಶ್ವರಪ್ಪ ನಮ್ಮ ಪಕ್ಷವನ್ನು ಕಟ್ಟಿ ಬೆಳೆಸಿದವರು. ಅವರ ಮನಸ್ಸಿಗೆ ನೋವಾಗಿರಬಹುದು ರಾಜ್ಯ ನಾಯಕರು ಅವರ ಜೊತೆ ಮಾತನಾಡುವ ಪ್ರಯತ್ನ ನಡೆಸಿದ್ದಾರೆ ಮೋದಿ ಅವರು ಬಂದಾಗ ಎಲ್ಲವೂ ಸರಿಯಾಗಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಬರ್ತಾರೆ. ಕಾರ್ಯಕ್ರಮದಲ್ಲಿ ಬಂದು ಮಾತನಾಡುವ ವಿಶ್ವಾಸ ಇದೆ ಎಂದರು.

ಅವರನ್ನ ಮತ್ತೆ ಕರ ತರುವ ಪ್ರಯತ್ನ ನಮ್ಮ ಪಕ್ಷದ ಹಿರಿಯರು ಮಾಡುತ್ತಿದ್ದಾರೆ. ಅವರ ಮನಸ್ಸಿಗೆ ಆದ ನೋವಿನಿಂದ ಈ ರೀತಿ ಹೇಳಿದ್ದಾರೆ. ಅವರ ಮಗನಿಗೆ ಟಿಕೆಟ್ ತಪ್ಪಲು ನಾವು ಕಾರಣರಲ್ಲ. ಕೇಂದ್ರದ ಚುನಾವಣಾ ಸಮಿತಿಯ ತೀರ್ಮಾನದಂತೆ ಟಿಕೆಟ್ ಹಂಚಿಕೆಯಾಗಿದೆ. ಇದರಲ್ಲಿ ನಮ್ಮ ಪಾತ್ರ ಇಲ್ಲ. ಪಾರ್ಲಿಮೆಂಟರಿಲ್ಲಿ ಅಂತಿಮ ತೀರ್ಮಾನವಾಗಿ ಟಿಕೆಟ್ ಹಂಚಿಕೆಯಾಗಿರುತ್ತದೆ. ಈಶ್ವರಪ್ಪನವರು ನಮ್ಮ ಬಗ್ಗೆ ತಪ್ಪು ಗ್ರಹಿಕೆ ಮಾಡಿಕೊಂಡಿದ್ದಾರೆ.ಮುಂದೆ ಎಲ್ಲವೂ ಸರಿಯಾಗುತ್ತದೆ ಎಂದರು.

ಇದನ್ನೂ ಓದಿ-https://suddilive.in/archives/10867

Related Articles

Leave a Reply

Your email address will not be published. Required fields are marked *

Back to top button