ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನ ಸೆಳೆದ ಪ್ರಖರ್ ಚತುರ್ವೇದಿ
ಸುದ್ದಿಲೈವ್/ಶಿವಮೊಗ್ಗ
ಭರ್ಜರಿ ರನ್ ಗಳ ಅಂತರದಿಂದ ನಿನ್ನೆ ಶಿವಮೊಗ್ಗದ ನವುಲೆಯ ಕೆಎಸ್ ಸಿಎ ಮೈದಾನದಲ್ಲಿ ನಡೆದಿದ್ದ ಕರ್ನಾಟಕ-ಮುಂಬೈ ತಂಡಗಳ ನಡಯವಿನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡ ಗೆದ್ದು ಬೀಗಿದೆ.
ಗೆದ್ದು ಬೀಗುವ ಜೊತೆಗೆ ಹೊಸ ದಾಖಲೆ ಸೃಷ್ಡಿಸಿದ್ದ ಪ್ರಖರ್ ಚತುರ್ವೇದಿಯ 404 ರನ್ಗಳಿಸಿ ಔಟಾಗದೆ ಸ್ಕ್ರೀಜ್ ನಲ್ಲಿ ಉಳಿದುಕೊಂಡಿದ್ದರು. ಗ್ರಾಮೀಣ ಭಾಗದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮಸಾಮಾಜಿಕ ಜಾಲತಾಣದಲ್ಲಿ ಹಾಡಿಹೊಗಳಿ ಗಮನ ಸೆಳೆದಿದ್ದಾರೆ.
79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್ ಬಿಹಾರ್ ಟ್ರೋಫಿ ಗೆದ್ದಿರುವ ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ಈ ಗೆಲುವು ಸಂಕ್ರಾಂತಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ.
ಆರಂಭಿಕ ಬ್ಯಾಟರ್ ಪ್ರಖರ್ ಚತುರ್ವೇದಿ ಅಜೇಯ 404 ರನ್ ಗಳಿಸಿ ದಾಖಲೆ ನಿರ್ಮಿಸಿರುವುದು ಹೆಮ್ಮೆಯ ಸಂಗತಿಯಾಗಿದೆ.
79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್ ಬಿಹಾರ್ ಟ್ರೋಫಿ ಗೆದ್ದಿರುವ ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ಈ ಗೆಲುವು ಸಂಕ್ರಾಂತಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ.
ಆರಂಭಿಕ ಬ್ಯಾಟರ್ ಪ್ರಖರ್ ಚತುರ್ವೇದಿ ಅಜೇಯ 404 ರನ್ ಗಳಿಸಿ ದಾಖಲೆ ನಿರ್ಮಿಸಿರುವುದು ಹೆಮ್ಮೆಯ ಸಂಗತಿಯಾಗಿದೆ.
ಕರ್ನಾಟಕ ತಂಡವು 890… pic.twitter.com/GLTcGxdEeP
— Siddaramaiah (@siddaramaiah) January 16, 2024
ಕರ್ನಾಟಕ ತಂಡವು 890 ರನ್ಗಳ ದಾಖಲೆಯ ಮೊತ್ತವನ್ನು ಪೇರಿಸುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ. ಯುವ ಆಟಗಾರರು ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲಿ ಎಂದು ಮನಃಪೂರ್ವಕವಾಗಿ ಹಾರೈಸುತ್ತಿದ್ದೇನೆ ಎಂದು ಟ್ವಿಟರ್ ಮತ್ತು ಫೇಸ್ ಬುಕ್ ನಲ್ಲಿ ಶುಭ ಹಾರೈಸಿದ್ದಾರೆ.
ಇದನ್ನೂ ಓದಿ-https://suddilive.in/archives/7021