ಸ್ಥಳೀಯ ಸುದ್ದಿಗಳು
ಕುಡಿಯುವ ನೀರು ವ್ಯತ್ಯಯ: ಸಹಕರಿಸಲು ಮನವಿ
ಸುದ್ದಿಲೈವ್/ಶಿವಮೊಗ್ಗ
ಇಡೀ ದೇಶವೇ ಅಯೋಧ್ಯ ರಾಮಮಂದಿರದ ಸಂಭ್ರಮಾಚರಣೆಯಲ್ಲಿ ಮುಳುಗಿರುವ ವೇಳೆಯಲ್ಲಿ ಶಿವಮೊಗ್ಗದಲ್ಲಿ ಕುಡಿಯುವ ನೀರಿನ ವ್ಯತ್ಯಾಯವಾಗುತ್ತಿರುವ ಬಗ್ಗೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆ ಹೊರಡಿಸಿದೆ.
ಜ.22 ರಂದು ಅಯೋಧ್ಯ ರಾಮಮಂದಿರ ಉದ್ಘಾಟನೆ ನಡೆಯುತ್ತಿರುವ ವೇಳೆಯಲ್ಲಿ ಮಂಡಳಿಯು ಯಾವ ಬಡಾವಣೆಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂಬ ಬಗ್ಗೆ ವಿವರಣೆ ನೀಡಿಲ್ಲ. ಆದರೆ ಎರಡು ದಿನಗಳಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ.
ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಜ.21 ಮತ್ತು 22 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನೂ ಓದಿ-https://suddilive.in/archives/7260