ಕ್ರೈಂ ನ್ಯೂಸ್

ತೀರ್ಥಹಳ್ಳಿ-ಹಸೆಮಣೆ ಏರಬೇಕಿದ್ದ ಯುವತಿ ನೇಣಿಗೆ ಶರಣು

ಸುದ್ದಿಲೈವ್/ತೀರ್ಥಹಳ್ಳಿ

ತೀರ್ಥಹಳ್ಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪುತ್ತಿರುವ ಘಟನೆಗಳು ಕಳೆದ ನಾಲ್ಕೈದು ದಿನಗಳಿಂದ ಸರಣಿ ರೂಪದಲ್ಲಿ ನಡೆಯುತ್ತಿದೆ. ಯುವತಿಯರೂ, ನವ ವಿವಾಹಿತರು ಹೀಗೆ ಸಾಲು ಸಾಲು ಮಹಿಳೆಯರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.

ಕಳೆದ ಮೂರು ನಾಲ್ಕು ದಿನಗಳ ಹಿಂದೆ ದಾಸನಕೋಡಿಯಲ್ಲಿ 8 ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಶಮಿತ (26) ಆತ್ಮಹತ್ಯೆ ಮಾಡಿಕೊಂಡಿದ್ದರೆ, ಅದರ ಬೆನ್ನಲ್ಲೇ ಬಿಳಕೊಪ್ಪದಲ್ಲಿ ಅಧೀಕ್ಷ ಎಂಬ ಯುವತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ  ಶರಣಾಗಿದ್ದಳು.

ಈಗ ಕಟ್ಟೆಹಕ್ಲಿ‌ನ ಚೈತ್ರ ಹಸಮಣೆ ಏರಲು ಕೆಲವೇ ದಿನಗಳು ಬಾಕಿ ಇರುವಾಗ ನೇಣಿಗೆ ಶರಣಾಗಿದ್ದಾಳೆ. ಮದುವೆಗೆ 13 ದಿನ ಇರುವ ವೇಳೆಯಲ್ಲಿ ಮನೆಯ ಬಚ್ಚಲು ಮನೆ ಪಕ್ಕದಲ್ಲಿನ ಜಾಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಚೈತ್ರ (26 ವರ್ಷ )ಳಿಗೆ ಫೆಬ್ರವರಿ 4 ರಂದು  ಮದುವೆ ನಿಗದಿ ಪಡಿಸಲಾಗಿತ್ತು. ಕುಟುಂಬ ಆಕೆಯ ಸಾವಿಗೆ ಮಾನಸಿಕ ಅಸ್ವಸ್ಥ ಹಾಗೂ ಅನಾರೋಗ್ಯ ಸಮಸ್ಯೆಯ ಕಾರಣ ತಿಳಿಸಿದೆ.ಎಂ ಕಾಂ ಪದವಿಧರೆ ಆಗಿರುವ ಚೈತ್ರ ಕಟ್ಟೆಹಕ್ಲಿನ ರಾಮಕೃಷ್ಣ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ತೀರ್ಥಹಳ್ಳಿಯ ಶವಗಾರದಲ್ಲಿ ಶವ ಇರಿಸಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೀರ್ಥಹಳ್ಳಿ, ಶಿವಮೊಗ್ಗ ಜಿಲ್ಲೆಯಲ್ಲಿಯೇ ಅತಿಹೆಚ್ಚು ಅಸ್ವಭಾವಿಕ ಸಾವಿನ ಪ್ರಕರಣಗಳು ದಾಖಲಾಗುತ್ತವೆ. ಮೂಲಗಳ ಪ್ರಕಾರ ವರ್ಷಕ್ಕೆ 60-80 ಆತ್ಮಹತ್ಯೆ ಪ್ರಕರಣಗಳು ದಾಖಲಾಗುತ್ತವೆ. ಈ ಹಿಂದೆ ಅತಿ ಹೆಚ್ಚು ಹೆಣ್ಣುಮಕ್ಕಳ ನಾಪತ್ತೆ ಪ್ರಕರಣಗಳು ದಾಖಲಾಗುತ್ತಿದ್ದವು. ಈಗ ಆತ್ಮಹತ್ಯೆಯ ಪ್ರಕರಣಗಳು ದಾಖಲಾಗುತ್ತಿವೆ.

ಇದನ್ನೂ ಓದಿ-https://suddilive.in/archives/7339

Related Articles

Leave a Reply

Your email address will not be published. Required fields are marked *

Back to top button