ಸ್ಥಳೀಯ ಸುದ್ದಿಗಳು

ನಾಳೆ ರಜೆ ಇಲ್ಲ-ಸಿಎಂ ಸ್ಪಷ್ಟನೆ

ಸುದ್ದಿಲೈವ್/ತುಮಕೂರು

ಅಯೋದ್ಯೆಯಲ್ಲಿ ರಾಮ ಮಮದಿರ ಉದ್ಘಾಟನೆ ಮತ್ತು ಬಾಲರಾಮನ ಪ್ರಾಣ ಪ್ರತಿಷ್ಠ ಕಾರ್ಯಕ್ರಮದ ದಿನ ರಜೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಸಿದ್ದಾರೆ.

ಕರ್ನಾಟಕದಲ್ಲಿಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗುತ್ತಾ ಎಂಬ ಪ್ರಶ್ನೆ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿದೆ ಮೂಡಿತ್ತು. ಈ ಪ್ರಶ್ನೆಗೆ ಈಗ ಉತ್ತರ ದೊರೆತಿದೆ.

ಅಯೋಧ್ಯೆ ರಾಮ ಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆಗೆ ಜನವರಿ 22ರಂದು ರಾಜ್ಯದಲ್ಲಿ ರಜೆ ಘೋಷಣೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತುಮಕೂರಿನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಈಗಾಗಲೇ ಸ್ವಯಂ ಪ್ರೇರಿತರಾಗಿ ಜನವರಿ 22ರ ಸೋಮವಾರ ಕೆಲ‌ ಖಾಸಗಿ ಶಾಲೆಗಳು ರಜೆ ಘೋಷಣೆ ಮಾಡಿವೆ. ಅಲ್ಲದೇ, ಈಗಾಗಲೇ ರಜೆ ಘೋಷಣೆ ‌ಮಾಡುವಂತೆ ಸರ್ಕಾರಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಮನವಿ ಮಾಡಿತ್ತು.

ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22ರಂದು ಜರುಗಲಿರುವ ಬಾಲ ರಾಮನ ಪ್ರತಿಷ್ಠಾಪನೆಗೆ ಈಗಾಗಲೇ ಹಲವು ರಾಜ್ಯಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಅದರಂತೆ ಮಹಾರಾಷ್ಟ್ರದಲ್ಲಿ ನಾಳೆ ರಜೆ ಘೋಷಿಸಿದ ಸರ್ಕಾರದ ವಿರುದ್ಧ ನಾಲ್ವರು ಅಲ್ಲಿನ ಹೈಕೋರ್ಟ್ ಮೆಟ್ಟಿಲು ಹತ್ತಿದ್ದರು.

ಇದನ್ನೂ ಓದಿ-https://suddilive.in/archives/7342

Related Articles

Leave a Reply

Your email address will not be published. Required fields are marked *

Back to top button