ಕ್ರೈಂ ನ್ಯೂಸ್

ಗಾಂಜಾ ಸಾಗಿಸುವಾಗ ಸಿಕ್ಕಿಬಿದ್ದಿದ್ದ ಆರೋಪಿಗೆ ಶಿಕ್ಷೆ ಪ್ರಕಟ

ಸುದ್ದಿಲೈವ್/ಶಿವಮೊಗ್ಗ

ನಾಲ್ಕು ವರ್ಷದ ಹಿಂದೆ ದ್ವಿಚಕ್ರವಾಹನದಲ್ಲಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದ ಆರೋಪಿಯೋರ್ವ ಖಾಕಿ ಕೈಗೆ ಸಿಕ್ಕಿಬಿದ್ದಿದ್ದ. ಆರೋಪಿಯ ವಿರುದ್ಧ ಆರೋಪ ದೃಢಪಟ್ಟ ಹಿನ್ನಲೆಯಲ್ಲಿ ಶಿಕಾರಿಪುರ ನ್ಯಾಯಾಲಯ ನಾಲ್ಕು ವರ್ಷ ಕಾರಾಗೃಹ ಸೆರೆವಾಸ ಮತ್ತು 20 ಸಾವಿರ ದಂಡ ವಿಧಿಸಿ ಆದೇಶಿಸಿದೆ. ದಂಡ ಕಟ್ಟಲು ವಿಫಲರಾದರೆ 6 ತಿಂಗಳ ಸೆರೆವಾಸ ಶಿಕ್ಷೆ ಹೆಚ್ಚಿಸಿ ಆದೇಶಿಸಿದೆ.

2020 ನೇ ಸಾಲಿನ ಫೆ.02 ರಂದು ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರ ಗುಂಡಿಯಲ್ಲಿ ಸಾರ್ವಜನಿಕರಿಗೆ ಮಾದಕವಸ್ತು ಗಾಂಜಾ ಮಾರಾಟ ಮಾಡಲು ತನ್ನ ಸ್ಕೂಟಿಯಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಆಗಿನ ಡಿವೈಎಸ್ಪಿ  ಅಡ್ಡೂರು ಶ್ರೀನಿವಾಸಲು ನೇತೃತ್ವದಲ್ಲಿ  ದಾಳಿ ನಡೆದಿತ್ತು.

ದಾಳಿ ವೇಳೆ ಆರೋಪಿ ಯಾಸೀರ್ ಪಾಷಾನನ್ನು ಬಂಧಿಸಿ ಆತನಿಂದ 1 ಕೆಜಿ 148 ಗ್ರಾಂ ತೂಕದ ಒಣ ಗಾಂಜಾವನ್ನು ಅಮಾನತ್ತು ಪಡಿಸಿಕೊಂಡು ಆರೋಪಿಯ ವಿರುದ್ಧ ಗುನ್ನೆ ಸಂಖ್ಯೆ 00052/2020 ಕಲಂ 8(ಸಿ), 20(ಬಿ)(2) ಎನ್.ಡಿ.ಪಿ.ಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.

ಪ್ರಕರಣದ ತನಿಖಾಧಿಕಾರಿಗಳಾದ ಎಎಸ್ಐ ಬೂದ್ಯಪ್ಪ  ಪ್ರಕರಣದ ತನಿಖೆ ನಡೆಸಿ ಆರೋಪಿಯ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕರಾಗಿ ಸುರೇಶ್ ಕುಮಾರ್  ಪ್ರಕರಣದ ಪರವಾಗಿ ಘನ ನ್ಯಾಯಾಲಯದಲ್ಲಿ ವಾದಮಂಡಿಸಿದ್ದರು,

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗ ದಲ್ಲಿ ಪ್ರಕರಣದ ವಾದ ನಡೆದು ಆರೋಪಿಯ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ಮಂಜುನಾಥ್ ನಾಯಕ್, ರವರು ನಿನ್ನೆ(ಫೆ-02 ರಂದು) ಆರೋಪಿಗೆ 04 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 20,000/- ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಆರೋಪಿ ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿಯಾಗಿ 06 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಸಿರುತ್ತಾರೆ.

ಇದನ್ನೂ ಓದಿ-https://suddilive.in/archives/8301

Related Articles

Leave a Reply

Your email address will not be published. Required fields are marked *

Back to top button