ಈಶ್ವರಪ್ಪನವರ ಹೇಳಿಕೆ ಸಮರ್ಥಿಸಿಕೊಂಡ ಬಿಎಸ್ ವೈ
ಸುದ್ದಿಲೈವ್/ಶಿವಮೊಗ್ಗ
ಮಾಜಿ ಸಚಿವ ಈಶ್ವರಪ್ಪ ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿ ಮಾಡಬೇಕೆಂಬ ಮನವಿಯನ್ನ ತಪ್ಪಾಗಿ ಅರ್ಥೈಸಲಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಮಾಜಿ ಡಿಸಿಎಂ ಪರ ಬ್ಯಾಟ್ ಬೀಸಿದ್ದಾರೆ.
ಸ್ವಗೃಹದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಬಿಎಸ್ ವೈ ಈಶ್ವರಪ್ಪ ರಾಷ್ಟ್ರ ದ್ರೋಹಿ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಿ ಎಂದಿದ್ದಾರೆ. ಅವರ ಹೇಳಿಕೆ ಬಗ್ಗೆ ಟೀಕೆ ಟಿಪ್ಪಣಿ ಅಪಾರ್ಥ ನಡೆಯುತ್ತಿದೆ ಹೇಳಿಕೆಗೆ ಸಂಬಂಧ ಇಲ್ಲ. ಅವರ ಹೇಳಿಕೆಗೆ ಅಪಾರ್ಥ ಕಲ್ಪಿಸುವ ಕೆಲಸ ಬೇಡ ಎಂದು ಬಿಎಸ್ ವೈ ಮನಿ ಮಾಡಿದ್ದಾರೆ.
ಎಫ್ ಐಆರ್ ಹಾಕಿದ್ರೆ ಏನು ತೊಂದರೆ ಇಲ್ಲ ಅದನ್ನು ನಾವು ಎದುರಿಸುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಏನು ಬೇಕಾದರೂ ಹೇಳಿಕೆ ಕೊಡ್ತಾರೆ. ನಾನು ಹೇಳಿದ್ದೆ ಸರಿ ಅಂತಾ ಸಾಬೀತು ಮಾಡುವ ಪ್ರಯತ್ನ ಮಾಡ್ತಾರೆ. ಸಿದ್ದರಾಮಯ್ಯ ಶಾಸಕರನ್ನು ದೆಹಲಿಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡಿದ್ದಾರೆ ಅದನ್ನು ಖಂಡಿಸುತ್ತೇನೆ ಎಂದು ಹೇಳಿದರು.
ಪ್ರತಿಭಟನೆ ಮಾಡುವ ಮೂಲಕ ರಾಜಕೀಯ ದೊಂಬರಾಟ ಮಾಡಿದ್ದಾರೆ ಎಂದು ಯಡಿಯೂರಪ್ಪ ಆರೋಪಿಸಿದ್ದಾರೆ.
ಇದನ್ನೂ ಓದಿ-https://suddilive.in/archives/8778