ರಾಜ್ಯ ಸುದ್ದಿಗಳು

ಸ್ಪೊಟಗೊಂಡ ಮಂಗನ ಕಾಯಿಲೆ

ಸುದ್ದಿಲೈವ್/ಶಿವಮೊಗ್ಗ

ಕೊರೋನ ಭೀತಿ ಕಮ್ಮಿಯಾಗುತ್ತಿದ್ದಂತೆ ಶಿವಮೊಗ್ಗದಲ್ಲಿ ಮಂಗನ ಕಾಯಿಲೆ ಹೆಚ್ಚಾಗುತ್ತಿದೆ. ಅಡಿಕೆ ಸುಲಿಯಲು ಹೋದವವರಿಗೆ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಆದರೆ ಆರೋಗ್ಯ ಇಲಾಖೆಯ ಪ್ರಕಾರ ಎಲ್ಲವೂ ಅಂಡರ್ ಕಂಟ್ರೋಲ್ ಇದೆ.

ಮಂಗನ ಕಾಯಿಲೆ ಕುರಿತಂತೆ ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ. ಜಿಲ್ಲೆಯಲ್ಲಿ  ಕೆಎಫ್ ಡಿ 6 ಜನರಿಗೆ ಪಾಸಿಟಿವ್ ಕಾಣಿಸಿಕೊಡಿದೆ. ಜೊತೆಗೆ ಪಕ್ಕದ ಜಿಲ್ಲೆಯ ಚಿಕ್ಕಮಗಳೂರಿನಲ್ಲಿ ಏಳು ಜನರಿಗೆ ಕೆಎಫ್ ಡಿ ಪಾಸಿಟಿವ್ ಕಂಡು ಬಂದಿದೆ ಎಂದು ಬುಲಿಟಿನ್ ತಿಳಿಸಿದೆ.

ಆದರೆ 11 ಜಿಲ್ಲೆಯಲ್ಲಿ ಈ ಕೆಎಫ್ ಡಿಯ ಪರಿಣಾಮಗಳು ಬೀರಲಿದ್ದು,  11ರಲ್ಲಿ ಇವತ್ತು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ  ಪಾಸಿಟಿವ್ ಕಾಣಿಸಿಕೊಂಡಿದೆ.  ಮತ್ತು ಶಿರಸಿ ಜಿಲ್ಲೆಯಲ್ಲಿ ಒಂದು ಪ್ರಕರಣ ಕಾಣಿಸಿಕೊಂಡಿಲ್ಲ ಎಂದು ಬುಲಿಟಿನ್ ತಿಳಿಸಿದೆ.

ಇಂದು 63 ಜನರಲ್ಲಿ ಕೆಎಫ್ ಡಿ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ 42 ಜನ ಶಿವಮೊಗ್ಗದ ಜಿಲ್ಲೆಯವರನ್ನ ಪರೀಕ್ಷೆಗೆ ಒಳಪಡಿಸಲಾಗಿದ್ದು 6 ಜನರಿಗೆ   ಸೋಂಕು ಪತ್ತೆಯಾಗಿದೆ. ಚಿಕ್ಕಮಗಳೂರಿನ  21 ಜನರಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದ್ದು, 7 ಜನರಲ್ಲಿ ಸೋಕು ತಗುಲಿದೆ ಎಂದು ಬುಲಿಟಿನ್ ತಿಳಿಸಿದೆ.

ಜನವರಿ 1, 2024 ರಿಂದ ಇವತ್ತಿನ ವರೆಗೆ 3220 ಜನರನ್ನ ಕೆಎಫ್ ಡಿ ಪರೀಕ್ಷೆಗೆ ಒಳಪಡಿಸಲಾಗಿದೆ. 89 ಜನರಲ್ಲಿ ಸೋಂಕು ಪತ್ತೆಯಾಗಿದೆ. 63 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರಲ್ಲಿ ಎರಡು ಸಾವಾಗಿದೆ. ಒಟ್ಟು 24 ಜನರಲ್ಲಿ ಸೋಂಕು  ಆಕ್ಟಿವ್ ಆಗಿದೆ.

ಜಿಲ್ಲೆಯಲ್ಲಿ ಪತ್ತೆಯಾದ ಕೆಎಫ್ ಡಿ ಸೋಂಕಿತರು ತೀರ್ಥಹಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣಗಳನ್ನ ಪತ್ತೆಹಚ್ಚುವಲ್ಲಿ ಆಶಾ ಕಾರ್ಯಕರ್ತರ ಪಾತ್ರ ಬಹುಮುಖ್ಯವಾಗಿ ಕಂಡು ಬರುತ್ತಿದೆ.

ಇದನ್ಬೂ ಓದಿ-https://suddilive.in/archives/8847

Related Articles

Leave a Reply

Your email address will not be published. Required fields are marked *

Back to top button