ಕ್ರೈಂ ನ್ಯೂಸ್
ರಸ್ತೆ ಅಘಾತ-ಯುವಕ ಸಾವು
ಸುದ್ದಿಲೈವ್/ಭದ್ರಾವತಿ
ಕ್ಯಾಂಟರ್ ಮತ್ತು ಬೈಕ್ ನಡುವೆ ರಸ್ತೆ ಅಪಘಾತವಾಗಿದ್ದು, ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ್ದಾರೆ.
ಭದ್ರಾವತಿಯ ಹುಣಸೇಕಟ್ಟೆ ಜಂಕ್ಷನ್ ಬಳಿ ಎಂಸಿ ಹಳ್ಳಿಯಿಂದ ಮಂಗಳೂರಿಗೆ ಹೊರಟಿದ್ದ ಎಳನೀರು ಲಾರಿಗೆ ಜಂಕ್ಷನ್ ಕಡೆಯಿಂದ ಭದ್ರಾವತಿಗೆ ಹೊರಟಿದ್ದ ಬೈಕ್ ಗೆ ಮುಖಾಮುಖಿ ಡಿಕ್ಕಿ ಉಂಟಾಗಿದೆ. ಅಭಿ ಎಂಬುವ 22 ವರ್ಷದ ಯುವಕ ಸ್ಥಳದಲ್ಲಿಯೇ ಸಾವು ಕಂಡಿದ್ದಾನೆ.
ಬೈಕ್ ನ ಹಿಂಬದಿ ಸವಾರನಿಗೆ ಗಾಯಗಳಾಗಿದ್ದು ಆತನನ್ನ ಆಸ್ಪತ್ರೆಗೆ ಸಾಗಿಸಲಾಗಿದೆ. ಪ್ರಕರಣ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನಿನ್ನೆ ಮಧ್ಯಾಹ್ನ ಘಟನೆ ಸಂಭವಿಸಿದೆ.
ಇದನ್ನೂ ಓದಿ-https://suddilive.in/archives/9293