ಸ್ಥಳೀಯ ಸುದ್ದಿಗಳು
ಹಿಂದೂ ಹರ್ಷನ ಹತ್ಯೆಯಾಗಿ ಎರಡು ವರ್ಷ-ಬಜಾರ್ ನಲ್ಲಿ ಪಂಜಿನ ಮೆರವಣಿಗೆ
ಸುದ್ದಿಲೈವ್/ಶಿವಮೊಗ್ಗ
ಹಿಂದು ಹರ್ಷ ಹತ್ಯೆಯಾಗಿ ಎರಡು ವರ್ಷ ಪೂರ್ಣಗೊಂಡಿದೆ. ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಿದೆ.
ಕಳೆದ ಎರಡು ವರ್ಷದ ಹಿಂದೆ ಹಿಂದು ಹರ್ಷ ಹತ್ಯೆಯಾಗಿತ್ತು. ಎರಡು ವರ್ಷದ ಪುಣ್ಯಸ್ಮರಣೆ ಅಂಗವಾಗಿ ವಿಶ್ವ ಹಿಂದು ಪರಿಷತ್ ಹಾಗು ಬಜರಂಗದಳ ಕಾರ್ಯಕರ್ತರಿಂದ ಪಂಜಿನ ಮೆರವಣಿಗೆ ನಡೆದಿದೆ. ಹರ್ಷನ ಫ್ಲೆಕ್ಸ್ ಹಾಕಿ ಪಂಜಿನ ಮೆರವಣಿಗೆ ನಡೆಸಲಾಗಿದೆ.
ಗಾಂಧಿ ಬಜಾರಿನ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಶಿವಪ್ಪನಾಯಕ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆದಿದೆ. ಅಮರ್ ರಹೇ, ಅಮರ್ ರಹೇ ಹರ್ಷ ಅಮರ್ ರಹೇ ಎಂದು ಕಾರ್ಯಕರ್ತರು ಘೋಷಣೆ ಕೂಗಿದರು.
ಇದನ್ನೂ ಓದಿ-https://suddilive.in/archives/9321