ಸ್ಥಳೀಯ ಸುದ್ದಿಗಳು
ಜಿಲ್ಲೆಯ ಮೂರು ರೈಲ್ವೆ ನಿಲ್ದಾಣಗಳು ಮೇಲ್ದರ್ಜೆಗೆ!
ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗ, ಸಾಗರ ಮತ್ತು ತಾಳಗುಪ್ಪ ರೈಲ್ವೆ ನಿಲ್ದಾಣವನ್ನ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಫೆ.26 ರಂದು ಪ್ರಧಾನಿ ಮೋದಿ ರೈಲ್ವೆ ನಿಲ್ದಾಣದ ಉನ್ನತೀಕರಣವನ್ನ ವರ್ಚ್ಯೂವಲ್ ಮೂಲಕ ಉದ್ಘಾಟಿಸಲಿದ್ದಾರೆ
ಶಿವಮೊಗ್ಗದ ರೈಲ್ವೆ ನಿಲ್ದಾಣವನ್ನ 2012 ರಲ್ಲಿ ಉನ್ನತೀಕರಣಗೊಳಿಸಲಾಗಿತ್ತು. ಈಗ ಮತ್ತೆ ರೈಲ್ವೆ ನಿಲ್ದಾಣವನ್ನ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಮೂರು ರೈಲ್ವೆ ನಿಲ್ದಾಣಗಳು ಮೇಲ್ದರ್ಜೆಗೆ ಏರಿಸಲಾಗುತ್ತಿದೆ.
ಮೂರು ನಿಲ್ದಾಣಗಳನ್ನ ಅಂದಾಜು 20 ಕೋಟಿ ಹಣದಲ್ಲಿ ಮೇಲ್ದರ್ಜೆಗೆ ಏರಿಸಲಾಗುತ್ತಿರುವ ಮಾಹಿತಿ ತಿಳಿದು ಬಂದಿದೆ. ಈ ಹಣದ ಏರಿಕೆ ಹೆಚ್ಚಾದರೂ ಅಚ್ಚರಿಯಿಲ್ಲ.
ಇದನ್ನೂ ಓದಿ-https://suddilive.in/archives/9401