ನಾಪತ್ತೆ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ನಾಪತ್ತೆ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಸೋಮವಾರ, ಸೆಪ್ಟೆಂಬರ್ 16, 2024

ನಾಪತ್ತೆ ಪ್ರಕರಣ ಕೊಲೆಯಲ್ಲಿ ಅಂತ್ಯ



ಸುದ್ದಿಲೈವ್/ಶಿರಾಳಕೊಪ್ಪ


ಗಣಪತಿ ಹಬ್ಬದಂದು ಜಂಬಿಟ್ಟಿಗೆ ಹೋಗಿದ್ದ ವ್ಯಕ್ಯಿ ಕಾಣಿಯಾದ ಪ್ರಕರಣ ತಿರುವು ಪಡೆದುಕೊಂಡಿದೆ. ಕಾಣೆಯಾದ ವ್ಯಕ್ತಿ ಕೊಲೆಯಾಗಿದ್ದು ಆರೋಪುಗಳನ್ನ ಶಿರಾಳಕೊಪ್ಪ ಪೊಲೀಸರು ಬಂಧಿಸಿದ್ದಾರೆ.


ಗಣಪತಿಹಬ್ಬದಂದು ಜಂಬಿಟ್ಟಿಗೆ ಕೆಲಸ ಕೇಳಿಕೊಂಡು ಬರಲು ಹೋದ ನಾಗಿಹಳ್ಳಿಯ ಕೃಷ್ಣಪ್ಪ ತಡರಾತ್ರಿಯಾದರೂ ಬಾರದ ಹಿನ್ನಲೆಯಲ್ಲಿ ಪತ್ನಿ ಭಾಗ್ಯ ಶಿರಾಳಕೊಪ್ಪದ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.


ಶಿವು ಯಾನೆ ಪ್ರತಾಪ್, ಕಿರಣ್, ಗಣೇಶ್ ಮತ್ತು ನಾಗರಾಜ್ ರವರ ವಿರುದ್ಧ ಅನುಮಾನ ವ್ಯಕ್ತಪಡಿಸಿ ಕೃಷ್ಣಪ್ಪರ ಪತ್ನಿ ದೂರು ದಾಖಲಿಸಿದ್ದರು. ಆದರೆ ಇದೇ ಮೂವರು ಕೃಷ್ಣಪ್ಪನನ್ನ ಕೊಲೆ ಮಾಡಿದ್ದಾರೆ. ಕೊಲೆ  ಪ್ರಕರಣ ಸುಮೋಟೋ ಪ್ರಕರಣ ದಾಖಲಾಗಿದೆ. 


ಪ್ರಕರಣ ಬಯಲಿಗೆ ಬಂದಿದ್ದು ಹೇಗೆ? 


ಕಳೆದ ಸೆಪ್ಟೆಂಬರ್‌ 7 ರಂದು ಈ ಘಟನೆ ನಡೆದಿದೆ. ಆದರೆ ಪ್ರಕರಣ ಬೆಳಕಿಗೆ ಬಂದಿದ್ದು, ನಾಪತ್ತೆ ಪ್ರಕರಣ ದಾಖಲಾದ ಬಳಿಕ. ನಾಗೀಹಳ್ಳಿ ನಿವಾಸಿ 33 ವರ್ಷದ ಕೃಷ್ಣಪ್ಪ ಎಂಬವರ ಪತ್ನಿ ಶಿರಾಳಕೊಪ್ಪ ಪೊಲೀಸ್‌ ಠಾಣೆಗೆ ತಮ್ಮ ಪತಿ ಕಾಣೆಯಾಗಿರುವುದಾಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ಆರಂಭಿಸಿದ ಶಿರಾಳಕೊಪ್ಪ ಠಾಣೆ ಪೊಲೀಸರು ಕೃಷ್ಣಪ್ಪರ ಪತ್ನಿ ನೀಡಿದ ಸಂಶಯದ ಸುಳಿವನ್ನ ಆಧರಿಸಿ ನಾಗೀಹಳ್ಳಿ ಗ್ರಾಮದ ಕಿರಣ ಎಂಬವನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಾರೆ. ಆ ಸಂದರ್ಭದಲ್ಲಿ ಕೃಷ್ಣಪ್ಪನ ಕೊಲೆಯ ರಹಸ್ಯ ಬಯಲಾಗುತ್ತದೆ. ಆತ ಹೇಳಿದ ಮಾಹಿತಿ ಆಧರಿಸಿ ಠಾಣೆಯ ಎಸ್‌ಐ ಪ್ರಶಾಂತ್‌ ಕುಮಾರ್‌ ಟಿಬಿ ಸುಮುಟೋ ಕೇಸ್‌ ದಾಖಲಿಸಿದ್ದಾರೆ. 



ನಡೆದಿದ್ದು ಏನು? 


ದಾಖಲಾಗಿರುವ ಸುಮುಟೋ ಕೇಸ್‌ನ ಎಫ್‌ಐಆರ್‌ ಪ್ರಕಾರ, ಕೃಷ್ಣಪ್ಪನ ಪತ್ನಿ ಜೊತೆ ಕಿರಣ್‌ ಎಂಬಾತ ಅನೈತಿಕ ಸಂಬಂಧ ಹೊಂದಿದ್ದ ಎಂದು ದೂರಲಾಗಿದೆ. ಇದೇ ವಿಚಾರದಲ್ಲಿ ಕೃಷ್ಣಪ್ಪ ಕಿರಣನನ್ನ ಕರೆದು ಬೈದು ಎಚ್ಚರಿಕೆ ನೀಡಿದ್ದನಂತೆ. ಈ ಕಾರಣಕ್ಕೆ ಕೃಷ್ಣಪ್ಪನನ್ನೆ ಕೊಲೆ ಮಾಡಲು ನಿರ್ಧರಿಸಿದ ಕಿರಣ ತನ್ನಿಬ್ಬರು ಸ್ನೇಹಿತರಾದ ಪ್ರತಾಪ್‌ ಹಾಗೂ ಗಣೇಶನ ಸಹಾಯ ಪಡೆದಿದ್ದಾನೆ. ಕೊಲೆಯ ಸ್ಕೆಚ್‌ ರೂಪಿಸಿಕೊಂಡ ಕಿರಣ, ಕಂದ್ಲಿ ಹಾಗೂ ಕುಡುಗೋಲು ಮತ್ತು ಪ್ಲಾಸ್ಟಿಕ್‌ ಕೊಪ್ಪೆಗಳನ್ನ ಬೈಕ್‌ವೊಂದರ ಬ್ಯಾಗ್‌ನಲ್ಲಿ ಇರಿಸಿಕೊಂಡು ಕೊಲೆ ಮಾಡಲು ಮುಂದಾಗಿದ್ದಾನೆ.


ತನ್ನ ಸ್ನೇಹಿತರಾದ ಗಣೇಶ ಹಾಗೂ ಪ್ರತಾಪನ ಮೂಲಕ ಕೃಷ್ಣಪ್ಪನಿಗೆ ಬೇರೆ ಊರಿನಲ್ಲಿ ಚೆನ್ನಾಗಿ ಕುಡಿಸಿ ತಡರಾತ್ರಿ ಗ್ರಾಮಕ್ಕೆ ವಾಪಸ್‌ ಕರೆ ತರುವಂತೆ ಹೇಳಿದ್ದೇನೆ. ಆತನ ಸ್ನೇಹಿತರು ಸಹ ಕಿರಣನ ಪ್ಲಾನಿನಂತೆ ಕೃಷ್ಣಪ್ಪನಿಗೆ ಚೆನ್ನಾಗಿ ಎಣ್ಣೆ ಹೊಡೆಸಿ ನಾಗಿಹಳ್ಳಿ ಕ್ರಾಸ್‌ ಬಳಿಗೆ ಕರೆತಂದಿದ್ದಾರೆ. ಅಲ್ಲಿಗೆ ಬಂದ ಕಿರಣ ಕೃಷ್ಣಪ್ಪನಿಗೆ ಹೊಡೆದು, ಬೈದು ನಂತರ ಕುಡುಗೋಲಿನಿಂದ ಕುತ್ತಿಗೆಗೆ ಏಟು ಕೊಟ್ಟಿದ್ದಾನೆ. ಆ ಬಳಿಕ ಅಲ್ಲಿಯೇ ಇದ್ದ ಗುಂಡಿಯೊಂದಕ್ಕೆ ಕೃಷ್ಣಪ್ಪನನ್ನ ಶಿಫ್ಟ್‌ ಮಾಡಿ ಆತನ ಅಂಗಾಂಗಗಳನ್ನ ಕತ್ತರಿಸಿ ಎರಡು ಪ್ಲಾಸ್ಟಿಕ್‌ ಚೀಲಗಳಿಗೆ ತುಂಬಿಕೊಂಡಿದ್ದಾರೆ. ಬಳಿಕ ಗಣೇಶ ಹಾಗೂ ಕಿರಣ ಒಂದು, ಪ್ರತಾಪ ಇನ್ನೊಂದು ಶವದ ಚೀಲವನ್ನ ಹಿಡಿದು ಕೊರಟೆಗೆರೆ , ಚಿಕ್ಕರೂರು, ಬಾರಂಗಿ ಮೂಲಕ ಗೋಂದಿ ಬ್ರಿಡ್ಜ್‌ ಬಳಿಗೆ ತೆರಳಿದ್ದಾರೆ. ಅಲ್ಲಿ ನದಿಗೆ ಎರಡು ಚೀಲದಲ್ಲಿದ್ದ ಕೃ‍ಷ್ಣಪ್ಪನ ಅಂಗಾಂಗಗಳನ್ನ ಸುರಿದು ಎಸ್ಕೇಪ್‌ ಆಗಿದ್ದಾರೆ. 


ನಾಪತ್ತೆ ಪ್ರಕರಣವನ್ನು ಸೀರಿಯಸ್‌ ಆಗಿ ತೆಗೆದುಕೊಂಡಿದ್ದ ಪೊಲೀಸರು ಕಿರಣ್‌ನನ್ನ ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆ ಕೃತ್ಯ ಬಯಲಿಗೆ ಬಂದಿದೆ. ಸದ್ಯ ಈ ಸಂಬಂಧ ಕೇಸ್‌ ದಾಖಲಾಗಿದ್ದು, ಸ್ವತಃ ಪೊಲೀಸರೇ ಸುಮುಟೋ ಕೇಸ್‌ ದಾಖಲಿಸಿರುವುದು ಇನ್ನಷ್ಟು ಕುತೂಹಲ ಮೂಡಿಸಿದೆ.

ಮಂಗಳವಾರ, ಆಗಸ್ಟ್ 27, 2024

ಹೊಸನಗರ ಕೋರ್ಟ್ ಎಫ್ ಡಿ ಎ ನಾಪತ್ತೆ



ಸುದ್ದಿಲೈವ್/ಶಿವಮೊಗ್ಗ


ಹೊಸನಗರದ ಕೋರ್ಟ್ ನಲ್ಲಿ ಎಫ್ ಡಿಎ ಆಗಿದ್ದ ಶಶಿಧರ್ ಎಂಬುವರು ನಾಪತ್ತೆಯಾಗಿರುವ ಬಗ್ಗೆ ಪತ್ನಿಯೇ ಎಫ್ಐಆರ್ ದಾಖಲಿಸಿದ್ದಾರೆ. 


ಹೊಸನಗರ ನ್ಯಾಯಾಲಯದಲ್ಲಿ ಎಫ್ ಡಿ ಎ ಆಗಿದ್ದ ಶಶಿಧರ್ ಆ.19 ರಂದು ಕೆಲಸಕ್ಕೆ ಹೋಗುವುದಾಗಿ ಹೇಳಿ ಕಾಣೆಯಾಗಿದ್ದಾರೆ. ಅನೇಕ ಬಾರಿ ಕರೆ ಮಾಡಿದರೂ ಕರೆ ಸ್ವೀಕರಿಸಿಲಿಲ್ಲ. ಸ್ವಲ್ಪ ಹೊತ್ತಾದ ನಂತರ ಬೇರೆ ನಂಬರ್ ನಿಂದ ಕರೆ ಮಾಡಿ ಆಧಾರ್ ಕಾರ್ಡ್ ಮತ್ತು ಫೊಟೊ ಹಾಕುವಂತೆ ಪತ್ನಿಗೆ ತಿಳಿಸಿದ್ದಾರೆ. 


ಫೊಟೊ ಮತ್ತು ಆದಾರ್ ಕಾರ್ಡ್ ಕಳುಹಿಸುತ್ತಿದ್ದಂತೆ ಮತ್ತೆ ಎರಡೂ ನಂಬರ್ ಗಳು ಸ್ವಿಚ್ ಆಫ್ ಆಗಿದೆ. ಪತ್ನಿ ಸರ್ಕಾರಿ ಶಾಲೆ ಶಿಕ್ಷಿಕಿಯಾಗಿದ್ದರೆ ಶಶಿಧರ್ ಶಿವಮೊಗ್ಗದ ವೀರಣ್ಣ ಲೇಔಟ್ ನಲ್ಲಿ ವಾಸವಾಗಿದ್ದರು. 


ಅವರ ಈ ರೀತಿಯ ನಾಪತ್ತೆ ಕುಟುಂಬಸ್ಥರಲ್ಲಿ ಆತಂಕ ಮೂಡಿಸಿದೆ. ಪತ್ನಿ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಮನುಷ್ಯ ಕಾಣೆ ದೂರು ನೀಡಿದ್ದಾರೆ.‌